ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಆಯ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂಘದ ನಿರ್ದೇಶಕ ಎಚ್.ಎನ್. ಅಶೋಕ (ತಮ್ಮಾಜಿ) ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಚುನಾವಣೆ ನಡೆಯಿತು. ಗೌರವ ಅಧ್ಯಕ್ಷರಾಗಿ ಬಿ. ಕೆಂಚಪ್ಪಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ್ ಹಾಗೂ ಸಿ. ದೇವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಸಿ. ಜಯಮುತ್ತು, ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡ, ಖಜಾಂಚಿಯಾಗಿ ಸಿ.ಎಂ.ಮಾರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group