ಪ್ರಮೋದ್ ಮುತಾಲಿಕ್ ರಾಜೀನಾಮೆ ಘೋಷಣೆ- ನೂತನ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಆಯ್ಕೆ

(ನ್ಯೂಸ್ ಕಡಬ) newskadaba.com ಹಾವೇರಿ, ಜು. 31. ಇದುವರೆಗೂ ಅಧ್ಯಕ್ಷರಾಗಿದ್ದ ಪ್ರಮೋದ್ ಮುತಾಲಿಕ್ ಅವರು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ವಯಂ ನಿವೃತ್ತಿ ಘೋಷಿಸಿದ್ದು, ಇದೀಗ ಸಿದ್ದಲಿಂಗ ಸ್ವಾಮೀಜಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಕರ್ನಾಟಕ ಶ್ರೀ ರಾಮಸೇನೆಯ ರಾಜ್ಯಾದ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ಇನ್ನು ಕರ್ನಾಟಕದ ಶ್ರೀರಾಮಸೇನೆ ರಾಜ್ಯಾಧ್ಯಕ್ಷರಾಗಿ ಗಂಗಾಧರ ಕುಲಕರ್ಣಿ ಅವರನ್ನು ನೇಮಕ ಮಾಡಿ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ.

error: Content is protected !!

Join the Group

Join WhatsApp Group