ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ ಏನು ಮಾಡುತ್ತಿದ್ದಾನೆ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ಸಂತ್ರಸ್ತೆ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ.

 

Scroll to Top