ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೂಚಿಸಿದರು.

ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯ, ಈ ಬಾರಿ ವಾಡಿಕೆಯಷ್ಟು ಮುಂಗಾರು ಸುರಿದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಶೇ.21 ರಷ್ಟು ಮಳೆ ಜಾಸ್ತಿಯಾಗಿದ್ದು, ಜಿಲ್ಲೆಯಲ್ಲಿ ಮಳೆ ಜೋರಾಗಿ ಸುರಿದಾಗ ಬರಲು ನನಗೆ ಸಾಧ್ಯವಾಗಿರಲಿಲ್ಲ. ಆಗ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಭೇಟಿ ನೀಡಿದ್ದರು. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.

Also Read  ಪ್ರಧಾನಿಯವರ ಜನ್ಮದಿನದ ಅಂಗವಾಗಿ ವಿಕಲಚೇತನರಿಗೆ ಉಚಿತ ವ್ಹೀಲ್ ಚಯರ್ ವಿತರಣೆ

error: Content is protected !!
Scroll to Top