ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಶ್ರೀಮತಿ ಮೀನಾಕ್ಷಿ ದಲಾಯತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಕಛೇರಿಯ ಆದೇಶದಂತೆ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಶ್ರೀಮತಿ ಮೀನಾಕ್ಷಿ ಅವರು 2015ನೇ ಇಸವಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ 7 ವರ್ಷಗಳಿಂದ ಕರ್ತವ್ಯ ನಿರ್ವಹಿಸಿರುತ್ತಾರೆ. ಇವರು ಓರ್ವ ಉತ್ತಮ ಕೆಲಸಗಾರರಾಗಿದ್ದು, ಎಲ್ಲರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದು, ನಗು ಮುಖದಿಂದ ಎಲ್ಲಾ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದರು. ಗೃಹರಕ್ಷಕರೊಂದಿಗೆ ಅನ್ಯೋನ್ಯವಾಗಿದ್ದು, ಯಾವುದೇ ಭೇದ ಭಾವವಿಲ್ಲದೆ ಅವರ ಕುಂದು ಕೊರತೆಗಳನ್ನು ವಿಚಾರಿಸುತ್ತಾ ಎಲ್ಲರೊಂದಿಗೆ ಹೊಂದಾಣಿಕೆಯಿಂದ ಬೆರೆಯುತ್ತಿದ್ದರು. ಇವರಿಗೆ ಮುಂದಿನ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದರು ಹಾಗೂ ಶಾಲು ಹೊದಿಸಿ, ಫಲಪುಷ್ಪ ನೀಡಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

Also Read  ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಉಪ ಸಮಾದೇಷ್ಟರಾದ ಶ್ರೀ ರಮೇಶ್ ಇವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಆಡಳಿತಾಧಿಕಾರಿ ಶ್ರೀಮತಿ ಕವಿತಾ ಕೆ.ಸಿ,  ಕಛೇರಿ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ, ಉಡುಪಿ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್ ಹಾಗೂ ಗೃಹರಕ್ಷಕರಾದ ಸುನೀಲ್ ಕುಮಾರ್, ಸುನೀಲ್ ಪೂಜಾರಿ, ಧನಂಜಯ್, ದಿವಾಕರ್, ಕೇಶವ ಶೆಟ್ಟಿಗಾರ್, ಪ್ರಸಾದ್, ನಿಖಿಲ್, ನವೀನ್, ಸಂದೇಶ್, ಜ್ಞಾನೇಶ್, ಸಂತೋಷ್, ಜಯಲಕ್ಷ್ಮಿ, ಸುಲೋಚನಾ ಮುಂತಾದವರು ಉಪಸ್ಥಿತರಿದ್ದರು.

Also Read  ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ಅಪರಿಚಿತ ಪಾದಚಾರಿ ಮೃತ್ಯು

error: Content is protected !!
Scroll to Top