ಮಾಣಿ: ಬಸ್ – ಕಾರು ಢಿಕ್ಕಿ ► ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.02. ಹಠಾತ್ತನೆ ರಸ್ತೆಗೆ ಬಂದ ನಾಗರ ಹಾವು ಚಕ್ರದಡಿಗೆ ಬೀಳುವುದನ್ನು ತಪ್ಪಿಸಿದ ಕಾರಿನ ಹಿಂದಿದ್ದ ಬಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಓಮ್ನಿ ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ.

ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನ ಮುಂಭಾಗದಿಂದ ಸಂಚರಿಸುತ್ತಿದ್ದ ಕಾರಿಗೆ ಹಠಾತ್ತನೆ ಅಡ್ಡ ಬಂದ ನಾಗರಹಾವನ್ನು ತಪ್ಪಿಸಲು ಕಾರು ಚಾಲಕ ಬ್ರೇಕ್ ಹಾಕಿದ್ದು, ಈ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಬಸ್ ಚಾಲಕ ಕಾರಿಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಬಲಬದಿಗೆ ತಿರುಗಿಸಿದ್ದಾರೆ. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಓಮ್ನಿ ಕಾರಿಗೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರು ಚಾಲಕ ಮೋಹನ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಉಳ್ಳಾಲದ ವ್ಯಕ್ತಿ ವಿಟ್ಲದಲ್ಲಿ ಆತ್ಮಹತ್ಯೆಗೆ ಶರಣು

error: Content is protected !!
Scroll to Top