ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಕಾರವಾರ, ಆ.03. ಕರ್ನಾಟಕ ಪಬ್ಲಿಕ್ ಶಾಲೆಯ ಸಹಾಯಕಿ ಆನಂದಿ ಎಂಬ ಮಹಿಳೆಗೆ ಹಾವು ಕಡಿದ ಘಟನೆ ಕಾರವಾರದಲ್ಲಿ ವರದಿ ತಿಳಿಸಿದೆ.


ಶಾಲಾ ಸಮಯದಲ್ಲಿ ನೀರಿನ ಪಂಪ್ ಸ್ಟಾರ್ಟ್ ಮಾಡಲು ತೆರಳುವ ವೇಳೆ ಆನಂದಿ ಅವರಿಗೆ ಹಾವು ಕಚ್ಚಿದೆ ಎನ್ನಲಾಗಿದೆ.
ತೀವ್ರ ಅಸ್ವಸ್ಥರಾದ ಅವರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದರು ಎಂದು ತಿಳಿದುಬಂದಿದೆ. ಇವರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

error: Content is protected !!

Join the Group

Join WhatsApp Group