ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.


ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಈ ಯೋಜನೆಯಡಿ ನೋಂದಾಯಿಸಬಹುದು. ಸಾರ್ವಜನಿಕ ಸೇವಾ ಕೇಂದ್ರದ ಮೂಲಕವೂ ನೋಂದಾಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ 6,400 ರೂ. ಹಾಗೂ 2,350 ರೂ.ಗಳಾಗಿದ್ದು ಆ. 31ರೊಳಗೆ ನೋಂದಾಯಿಸಬಹುದು ಎಂದು ತೋಟಾಗಾರಿಕಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top