ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.05. ಅಪರಿಚಿತ ವ್ಯಕ್ತಿಗಳಿಂದ ಮಾನಹಾನಿಗೆ ಯತ್ನ ಮತ್ತು ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸೌಜನ್ಯ ತಾಯಿ ಕುಸುಮಾವತಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಸೌಜನ್ಯಾಗೆ 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದ್ದು, ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೇನೆ ಎಂದು ಹೇಳಿದ್ದಾರೆ. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group