ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ತೀರ ಪ್ರದೇಶದಿಂದ 5 ನಾಟಿಕಲ್ ಮೈಲುಗಳ ದೂರಕ್ಕೆ ಹೋದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.  ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ದೋಣಿಯಲ್ಲಿದ್ದ ಮೀನುಗಾರರೊಬ್ಬರು ಸುಮಾರು ಹತ್ತು ಕಿಲೋ ಮೀಟರ್ ದೂರದಲ್ಲಿ ಬಲೆಗಳ ನಡುವೆ ಸಿಕ್ಕಿ ಬಿದ್ದಿರುವುದನ್ನು ಗಮನಿಸಿದ  ಮತ್ತೊಂದು ದೋಣಿಯ ಮೀನುಗಾರ ಇತರರಿಗೆ ಮಾಹಿತಿ ನೀಡಿದ್ದಾರೆ.

Also Read  ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

error: Content is protected !!
Scroll to Top