ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಉದ್ಯಮ‌ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜದ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ,ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

error: Content is protected !!

Join the Group

Join WhatsApp Group