ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

Also Read  ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ➤ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್

ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.

error: Content is protected !!
Scroll to Top