ಬಸ್‌‌ಗೆ ಪಿಕಪ್ ವಾಹನ ಢಿಕ್ಕಿ – ಇಬ್ಬರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮುಲ್ಕಿ, . 08. ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿ ನಡೆದಿದೆ.

ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು ಲೋಡ್ ಮಾಡಿಕೊಂಡು ಬರುತ್ತಿದ್ದ ಪಿಕಪ್, ಮುಲ್ಕಿ ಬಸ್ಸು ನಿಲ್ದಾಣದ ಜಂಕ್ಷನ್ ತಲುಪುತ್ತಿದ್ದಂತೆ ಕಿನ್ನಿಗೋಳಿ ಕಡೆಗೆ ಹೋಗಲು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪಿಕಪ್ ಮುಂಭಾಗ ಜಖಂಗೊಂಡಿದ್ದು, ಅದರಲ್ಲಿದ್ದ ಕಣ್ಣೂರು ನಿವಾಸಿಗಳಾದ ಚಾಲಕ ಲುಕ್ಮಾನ್ ಹಾಗೂ ನಿರ್ವಾಹಕ ರಂಜಾದ್ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!!

error: Content is protected !!
Scroll to Top