ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡ್, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಸೋಮವಾರದಂದು ಕಾಣೆಯಾಗಿದ್ದವು. ಅವುಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದೆ. ನಂದ ಕುಮಾರ್ ರನ್ನು ನೋಡಿದ ಆರೋಪಿ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಬಿ ಮೂಡ ಗ್ರಾಮದ ನಿವಾಸಿ, ಕೆ.ಎನ್.ಆರ್ ಕನ್ಸ್ಟ್ರಕ್ಷನ್ ಪಿಆರ್.ಒ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ನಂದಕುಮಾರ್ ಅವರು ನೀಡಿದ ದೂರಿನನ್ವಯ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

error: Content is protected !!
Scroll to Top