ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!!

(ನ್ಯೂಸ್ ಕಡಬ)newskadaba.com ರಾಯಚೂರು, ಆ.09. ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಸಂಭವಿಸಿದೆ.

ಹೊಲದಲ್ಲಿ ಈ ಮಹಿಳೆಯ ಮೃತದೇಹ ಕಂಡುಬಂದಿದ್ದು, ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು, ಶ್ವಾನ ದಳದಿಂದ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ.

Also Read  ಬೆಳ್ಳಂಬೆಳಗ್ಗೆ ಬಾವಿ ತಡೆಗೋಡೆಗೆ ಲಾರಿ ಡಿಕ್ಕಿ ➤ ಪ್ರಾಣಾಪಾಯದಿಂದ ಪಾರಾದ ಚಾಲಕ ಮತ್ತು ನಿರ್ವಾಹಕ

ಮಹಿಳೆಯ ಮುಖ, ಗುರುತು ಪತ್ತೆಯಾಗದಂತೆ ಯಾವ ಕೆಮಿಕಲ್ ಬಳಸಿರಬಹುದು ಅಥವಾ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಮಹಿಳೆಯ ಗುರುತು ಪತ್ತೆಯಾಗಿಲ್ಲ‌. ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

 

 

error: Content is protected !!
Scroll to Top