ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.


ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group