KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ



(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.11. KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ.








ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ ಕಡೆ ಹೋಗುವ ವೇಳೆ ನಾಲ್ಕು ಮಾರ್ಗ ಕೂಡುವ ಬೈಪಾಸ್ ಜಂಕ್ಷನ್ ನಲ್ಲಿ ಅಪಘಾತ ನಡೆದಿದ್ದು, ಬೈಕ್ ಸವಾರ ಬಂಟ್ವಾಳದಿಂದ ಹೈವೆಯ ಮೂಲಕ ಮೂಡಬಿದಿರೆ ರಸ್ತೆಗೆ ಏಕಾಏಕಿ ನುಗ್ಗಿಸಿದ ಪರಿಣಾಮವಾಗಿ ಬಸ್ ಚಾಲಕನಿಗೆ ಬೈಕ್ ಬರುವುದು ಕಂಡಿಲ್ಲ. ಹಾಗಾಗಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸರಕಾರಿ ಬಸ್ ಚಾಲಕ ಅಪಘಾತ ತಪ್ಪಿಸಲು ಬ್ರೇಕ್ ಹಾಕಿ ಸಾಕಷ್ಟು ಪ್ರಯತ್ನ ಪಟ್ಟ ಬಗ್ಗೆ ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.






error: Content is protected !!
Scroll to Top