ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜಾಜಿನಗರ 1ನೇ ಎನ್ ಬ್ಲಾಕ್‌ ನಲ್ಲಿರುವ ಬಿಡಬ್ಲ್ಯೂ ಎಸ್‌ಎಸ್‌ಬಿ ಕ್ವಾರ್ಟರ್ಸ್‌ ನ ಆವರಣದಿಂದ ಬೆಲೆ ಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ.


ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದರಿಂದ ನಿವಾಸಿಗಳು ಎಚ್ಚೆತ್ತಿದ್ದಾರೆ. ಬೊಗಳುವ ಸದ್ದು ಕೇಳಿದ ನಿವಾಸಿಗಳು ಮರಗಳತ್ತ ತೆರಳಿ ಐವರಲ್ಲಿ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ BWSSB ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದೂರು ದಾಖಲಿಸಿದ್ದಾರೆ. ಪೊಲೀಸರು ಕರ್ನಾಟಕ ಅರಣ್ಯ ಕಾಯ್ದೆಯಡಿ ಐಪಿಸಿಯ ಇತರ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಕೂಡ ಸಾರ್ವಜನಿಕರ ಮೇಲೆ ಮರದ ಹಲಗೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

error: Content is protected !!

Join the Group

Join WhatsApp Group