ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಇಂದು ಕೊನೇ ದಿನಾಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ತಾಲೂಕಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 18ರೊಳಗೆ ಅರ್ಜಿ ಅಹ್ವಾನಿಸಲಾಗಿದೆ.

ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ 9008434151 ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ

error: Content is protected !!
Scroll to Top