ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 19. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಸಂದರ್ಭ ತಪಾಸಣಾ ನಿರತ ಪೊಲೀಸರು ವಾಹನ ಹಾಗೂ ಗೋವುಗಳನ್ನು ವಶಕ್ಕೆ ಪಡೆದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

ಸುಬ್ರಹ್ಮಣ್ಯದ ಕುಲ್ಕುಂದ – ಬಿಸಿಲೆ ಘಾಟ್ ರಸ್ತೆಯಲ್ಲಿ ಗುರುವಾರದಂದು ಸಂಜೆ ಸುಬ್ರಹ್ಮಣ್ಯ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸುಬ್ರಹ್ಮಣ್ಯ ಭಾಗದಿಂದ ಬಂದ ಗೂಡ್ಸ್‌ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದ್ದು. ಈ ವೇಳೆ ವಾಹನದ ಚಾಲಕ ಹಾಗೂ ಇನ್ನೊರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ವಾಹನವನ್ನು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ದನ ಪತ್ತೆಯಾಗಿದೆ. ಪೊಲೀಸರು ವಾಹನ ಹಾಗೂ ಮೂರು ದನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ

error: Content is protected !!
Scroll to Top