ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ.

ಮುಂಬೈಯಿಂದ ಬಂದಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ರೈಲ್ವೇ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್ ಗಳಿಗೆ ಆವರಿಸಿದೆ. ಈ ವೇಳೆ ರೈಲಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ

error: Content is protected !!
Scroll to Top