ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನರಿಮೊಗರು ಐಟಿಐ ಮೈದಾನದ ಪಕ್ಕದಲ್ಲಿ ಶನಿವಾರದಂದು ನಡೆದಿದೆ.

ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ.


ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯವರು ಕ್ರೇನ್ ಮುಖಾಂತರ ಕಾಡುಕೋಣವನ್ನು ಬಾವಿಯಿಂದ ಮೇಲಕೆತ್ತಿದ್ದಾರೆ. ಮೃತಪಟ್ಟಿರುವ ಕಾಡುಕೋಣಕ್ಕೆ ಅಂದಾಜು 4 ರಿಂದ 5 ವರ್ಷ ಪ್ರಾಯವಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಎಫ್ ಸುಬ್ಬಯ್ಯ ನಾಯ್ಕ, ಆರ್‌ಎಫ್ ಕಿರಣ್, ಡಿವೈಆರ್ ಎಫ್ ಕುಮಾರಸ್ವಾಮಿ ಹಾಗೂ ಪ್ರಸಾದ್ ಕೆ.ಜೆ, ಬೀಟ್ ಫಾರೆಸ್ಟ್ ಸತ್ಯನ್ ಡಿ.ಜಿ, ದೀಪಕ್, ಚಿದಾನಂದ, ಅರಣ್ಯ ವೀಕ್ಷಕ ಶೀನಪ್ಪ ಭಾಗವಹಿಸಿದ್ದರು.

error: Content is protected !!

Join the Group

Join WhatsApp Group