ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆಯೇ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳದ ಸಜಿಪ ನಡು ನಿವಾಸಿ ಎಸ್.ಎಮ್ ನೌಫಾಲ್ ಬಂಧಿತ ಆರೋಪಿ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಎನ್ ಡಿಪಿಎಸ್ ಕಾಯ್ದೆಯನ್ವಯ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಆದರೆ ಈತನಿಗೆ ಅನಾರೋಗ್ಯವಿದ್ದ ಕಾರಣ ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯೊಂದಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಪಿ ನೌಫಾಲ್, ಆಗಸ್ಟ್ 16ರಂದು ಪೊಲೀಸ್ ಭದ್ರತೆಯಿದ್ದರೂ ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಇದೀಗ ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಸಿಬ್ಬಂದಿಗಳು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Also Read  ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

error: Content is protected !!
Scroll to Top