ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಇಂದು ಕರಾವಳಿಯಾದ್ಯಂತ ನಾಗರ ಪಂಚಮಿ ಹಬ್ಬವನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ವಿವಿಧ ಕುಟುಂಬಗಳ ಮನೆಗಳಲ್ಲೇ ನಾಗಾರಾಧನೆ ನಡೆಯುತ್ತದೆ.


ಕರಾವಳಿಯಲ್ಲಿ ನಾಗಾರಾಧನೆಗೆ ತನ್ನದೇ ಆದ ಮಹತ್ವವಿದ್ದು, ತುಳುನಾಡ ಜನರ ಪಾಲಿನ ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರ ಪಂಚಮಿ. ಮಂಗಳೂರಿನ ನಗರ ವ್ಯಾಪ್ತಿಯಲ್ಲಿ ಕುಡುಪು ಅನಂತಪದ್ಮನಾಭ ದೇವಸ್ಥಾನ, ಉರ್ವ ಮಾರಿಯಮ್ಮ, ಕದ್ರಿ ಹಾಗೂ ಶ್ರೀ ಕ್ಷೇತ್ರ ಮಂಗಳಾದೇವಿ ಸಹಿತ ವಿವಿಧ ದೇವಸ್ಥಾನಗಳಲ್ಲಿ ನಾಗರ ಪಂಚಮಿ ಆಚರಣೆ ನಡೆಯಲಿದೆ.

Also Read  ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!!

error: Content is protected !!
Scroll to Top