ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಮೊದಲು ಆ. 21ರ ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಇದೀಗ ಗ್ರಾಹಕರ ಒತ್ತಾಯದ ಮೇರೆಗೆ ತಿದ್ದುಪಡಿ ಮತ್ತು ಸೇರ್ಪಡೆ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸಲಾಗುವುದು. ಸರ್ವರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು. ಸಾರ್ವಜನಿಕರು ಆನ್‌ಲೈನ್ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಸೇವೆ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

Also Read  ಮಹಾಕಾಲ ಭೈರವ ಅನುಗ್ರಹದಿಂದ ದಿನಭವಿಷ್ಯ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ.

error: Content is protected !!
Scroll to Top