ದಕ್ಷಿಣ ಕನ್ನಡದ 6 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡದ 6 ಮಂದಿ ಇನ್‌ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಬಜ್ಪೆ ಇನ್‌ಸ್ಪೆಕ್ಟರ್ ನಿರಂಜನ್ ಕುಮಾರ್ ಸಕಲೇಶಪುರ ಗ್ರಾಮಾಂತರ ವೃತ್ತಕ್ಕೆ , ಐಎಸ್‌ಡಿಯಲ್ಲಿದ್ದ ಸಂದೇಶ್ ಮೂಡುಬಿದಿರೆ ಠಾಣೆಗೆ, ಡಿಸಿಆ‌ರ್‌ಇ ನಲ್ಲಿದ್ದ ಅಜ್ಮತ್ ಅಲಿಗೆ ಬಜ್ಪೆ ಠಾಣೆಗೆ, ಸಿಟಿ ಎಸ್‌ಬಿಯಲ್ಲಿದ್ದ ಮುಹಮ್ಮದ್ ಶರೀಫ್‌ ಮಂಗಳೂರು ಸಂಚಾರ ಉತ್ತರ, ಪಣಂಬೂರಿನ ಸೋಮಶೇಖರ್ ಕದ್ರಿ ಠಾಣೆಗೆ ಹಾಗೂ ಕದ್ರಿಯ ಅನಂತ ಪದ್ಮನಾಭರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಲಾಗಿದೆ.

error: Content is protected !!

Join the Group

Join WhatsApp Group