ಇಂದು(ಆ. 29) ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆ. 29ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:
ಅವರು ಆ. 29ರ ಮಂಗಳವಾರ ಬೆಳಗ್ಗೆ 10 ರಿಂದ 12.30ರವರೆಗೆ ಜಿಲ್ಲೆಯ ವಿವಿಧ ಕಚೇರಿಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. 12.30 ರಿಂದ 1 ಗಂಟೆಯವರೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ನಂತರ 2 ಗಂಟೆಯಿಂದ ಸಂಜೆ 6.30 ರ ವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಲಿಂಗಾನುಪಾತ ತಡೆಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಕಟ್ಟುನಿಟ್ಟಿನ ಕ್ರಮ ► ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

error: Content is protected !!
Scroll to Top