ಇನ್ನುಮುಂದೆ ಚುನಾವಣಾ ಕರ್ತವ್ಯ ಸಿಬ್ಬಂದಿಗಳಿಗೆ ಬೂತಲ್ಲೇ ಅಂಚೆ ಮತದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಆದೇಶಿಸಿದೆ.

ಅಂಚೆ ಮತದಾನದ ದುರ್ಬಳಕೆಯನ್ನು ತಡೆಯಲು ಕೇಂದ್ರ ಚುನಾವಣಾ ಆಯೋಗವು ಪ್ರಸ್ತಾಪ ಸಲ್ಲಿಸಿದ್ದ ಹಿನ್ನಲೆ ಶಿಫಾರಸ್ಸನ್ನು ಅಂಗೀಕರಿಸಿದ ಕೇಂದ್ರ ಕಾನೂನು ಸಚಿವಾಲಯ ಈ ಅಧಿಸೂಚನೆಯನ್ನು ಹೊರಡಿಸಿದೆ. ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೆ ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.

Also Read  2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..!

error: Content is protected !!
Scroll to Top