ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 13. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕನ ಸಹಿತ ಮೂವರು ಗಾಯಗೊಂಡ ಘಟನೆ ಉಜಿರೆಯ ಟಿ.ಬಿ ಕ್ರಾಸ್ ಸಮೀಪ ಬುಧವಾರದಂದು ಸಂಭವಿಸಿದೆ.


ಆಟೋ ರಿಕ್ಷಾವೊಂದು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ವೇಳೆ ಮುಂದಿನಿಂದ ತೆರಳುತ್ತಿದ್ದ ಲಾರಿಯೊಂದು ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ ಕಾರಣ ರಿಕ್ಷಾವನ್ನೂ ನಿಲ್ಲಿಸಬೇಕಾಯಿತು. ಆದರೆ ದುರದೃಷ್ಟವಷಾತ್ ಹಿಂದಿನಿಂದ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಢಿಕ್ಕಿ ಹೊಡಿದಿದೆ. ಎರಡೂ ಲಾರಿಗಳ ಮಧ್ಯೆ ಸಿಲುಕಿಕೊಂಡ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ರಿಕ್ಷಾ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಎಡಮಂಗಲ: ಕಾಣೆಯಾಗಿದ್ದ ವಿವಾಹಿತೆ ಮಂಡ್ಯದಲ್ಲಿ ಪತ್ತೆ.!

error: Content is protected !!
Scroll to Top