ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಇಲ್ಲಿನ ಗೃಹರಕ್ಷಕ ದಳದ ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು.

 

ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೃಹರಕ್ಷಕರು ಒಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ, ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕರು ಬಹಳ ಅಗತ್ಯ ಅವರ ಸಮಸ್ಯೆಗಳಿಗೆ ಸರಕಾರ ಹೆಚ್ಚಿನ ರೀತಿಯಲ್ಲಿ ಸ್ಪಂದಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ವೆಂಚರ್ಸ್ ಇದರ ಮ್ಯಾನೇಜರ್ ಶ್ರೀ ಬಾಲಕೃಷ್ಣ ಭಟ್ ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು  ಅವರು ಮಾತನಾಡಿ, 50 ವರ್ಷಗಳ ಇತಿಹಾಸವಿರುವ ಪುತ್ತೂರು ಘಟಕಕ್ಕೆ ಸರಕಾರ 10 ಸೆಂಟ್ಸ್ ಜಾಗ ಮಂಜೂರು ಮಾಡಿದೆ. ಶೀಘ್ರದಲ್ಲೇ ಸ್ವಂತ ಕಟ್ಟಡ ಆರಂಭವಾಗಲಿದೆ ಎಂದು ಹೇಳಿದರು. ಪುತ್ತೂರು ಘಟಕದ ಘಟಕಾಧಿಕಾರಿ ಶ್ರೀ ಅಭಿಮನ್ಯು ರೈ, ಹಿರಿಯ ಗೃಹರಕ್ಷಕರಾದ ಜಗನ್ನಾಥ್, ಸುದರ್ಶನ್ ಜೈನ್ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.

Also Read  ಕಡಬ ತಾಲೂಕಿನ ವಿವಿಧ ಕಾಮಗಾರಿಗಳಿಗೆ ಸಚಿವ ಅಂಗಾರರಿಂದ ಚಾಲನೆ

error: Content is protected !!
Scroll to Top