ಅಕ್ರಮವಾಗಿ ತಂಬಾಕು ಉತ್ಪನ್ನ ಸಾಗಾಟ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 15. ಕರ್ನಾಟಕದಿಂದ ಕಾಸರಗೋಡಿಗೆ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 240 ಕಿಲೋ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತರನ್ನು ಉಳಿಯತ್ತಡ್ಕದ ಕೆ.ಅನ್ವರ್ ಅಲಿ ಮತ್ತು ಚೆರ್ಕಳದ ಬಿ. ಮೊಯ್ದು ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಹೊಸಂಗಡಿ ಅಬಕಾರಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಅಕ್ರಮ ಸಾಗಾಟ ಪತ್ತೆಯಾಗಿದೆ.

Also Read  74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

error: Content is protected !!
Scroll to Top