ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ತೃತೀಯ ಚರಣ (ಕಬ್) ಸುವರ್ಣ ಗರಿ (ಬುಲ್ ಬುಲ್) ತೃತೀಯ ಸೋಪಾನ (ಸ್ಕೌಟ್ಸ್-ಗೈಡ್ಸ್) ಹಾಗೂ ನಿಪುಣ್(ರೋವರ್ಸ್-ರೇಂಜರ್ಸ್) ಪ್ರಶಸ್ತಿ ಪ್ರಧಾನ ಸಮಾರಂಭ ಸೆಪ್ಟೆಂಬರ್ 17ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಬಲ್ಮಠ ವೃತ್ತದಲ್ಲಿರುವ ಕಲೆಕ್ಟರ್ಸ್ ಗೇಟ್ ನ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಿಗಧಿಯಾಗಿತ್ತು. ಕಾರಣಾಂತರಗಳಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group