ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ

(ನ್ಯೂಸ್ ಕಡಬ) newskadaba.com ಕುಣಿಗಲ್, ಸೆ. 16. ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಹೇರೂರು ಸೇತುವೆ ಬಳಿ ಶುಕ್ರವಾರದಂದು ರಾತ್ರಿ ನಡೆದಿದೆ.


ಮೃತಪಟ್ಟವರನ್ನು ನಾಗಮಂಗಲ ತಾಲೂಕು ಸೀಗೇಹಳ್ಳಿ ಗ್ರಾಮ ಹಾಲಿ ಬೆಂಗಳೂರು ಮಾದನಾಯಕಹಳ್ಳಿ ನಿವಾಸಿ ಶೋಭಾ ಮತ್ತು ಮಗ ನಿಖಿಲ್ ಗೌಡ(12) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪತಿ ಗಂಗೇಶ್ ಹಾಗೂ ಮಗಳು ಭುವನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೇಶ್ ಹಾಗೂ ಕುಟುಂಬ ಗೌರಿ ಗಣೇಶ ಹಬ್ಬಕ್ಕೆಂದು ಬೆಂಗಳೂರಿನಿಂದ ತಮ್ಮ ಸ್ವಗ್ರಾಮ ಸೀಗೇಹಳ್ಳಿ ಗ್ರಾಮಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಹೇರೂರು ಸೇತುವೆ ಬಳಿ ಲಾರಿಯೊಂದು ಹಠಾತ್ ಬ್ರೇಕ್ ಹಾಕಿದ ಕಾರಣ ವೇಗದಿಂದಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

error: Content is protected !!

Join the Group

Join WhatsApp Group