ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ’ನಲ್ಲಿ ಭೀಕರ ಅಪಘಾತ ಸಂಭವಿಸಿ ಮಾಜಿ ಸೈನಿಕ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್ ಪ್ರೆಸ್ ವೇಯಲ್ಲಿ ಭಾನುವಾರ ಮುಂಜಾವ ಸಂಭವಿಸಿದೆ.


ಮೃತರನ್ನು ಆನೇಕಲ್ ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಎಂದು ಗುರುತಿಸಲಾಗಿದೆ. ಆನೇಕಲ್‌ನಿಂದ ತಮಿಳುನಾಡಿಗೆ ಎಕ್ಸ್‌ಯುವಿ ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿ ಹೊಡೆದಿದ್ದು, ಸ್ಥಳದಲ್ಲಿಯೇ ಕಿಶೋರ್ ಮೃತಪಟ್ಟಿದ್ದಾರೆ. ನಂತರ ಕಾರಿಗೆ ಬೆಂಕಿ ಹೊತ್ತಿ ಉರಿದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ನೆಲ್ಯಾಡಿ: ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ ➤ 24 ಗಂಟೆಗಳ ಒಳಗೆ ಆರೋಪಿಯ ಬಂಧನ

error: Content is protected !!
Scroll to Top