ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ‌ ಪುನೀತ್ ಕೆರೆಹಳ್ಳಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಮಂಡ್ಯದ ಇದ್ರೀಸ್ ಪಾಷಾ ಕೊಲೆಯ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ ಹಾಗೂ ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿದ್ದವು. ಇನ್ನು ಈತನಿಗೆ ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದ್ದು, ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಈತನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರು. ಆಗಸ್ಟ್‌ 11 ರಂದು ರಾತ್ರಿ ಪುನೀತ್ ನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ಇದೀಗ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Also Read  ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

error: Content is protected !!
Scroll to Top