ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ

error: Content is protected !!
Scroll to Top