ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಮೃತ್ಯು..!



(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದ ಯುವತಿಯೋರ್ವಳು ಅಪಾರ್ಟ್‌‌ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.








ಮೃತ ಯುವತಿಯನ್ನು ವಿಜಯಲಕ್ಷ್ಮಿ (17) ಎಂದು ಗುರುತಿಸಲಾಗಿದೆ. ಖಿನ್ನತೆಗೊಳಗಾಗಿದ್ದ ವಿಜಯಲಕ್ಷ್ಮೀ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೂ ಮೊದಲು ಧರ್ಮಸ್ಥಳಕ್ಕೆ ಹೋಗಿದ್ದ ಆಕೆ ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರಿಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದಿದ್ದ ಆಕೆ ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.






error: Content is protected !!
Scroll to Top