ಬಂಟ್ವಾಳ: ನಗರ ಠಾಣಾ ಎಸ್ಐ ಆಗಿ ಅನಂತ ಪದ್ಮನಾಭ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಕರ್ತವ್ಯಕ್ಕೆ ಹಾಜರಾಗಿದ್ದು, ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.


ಈ ಮೊದಲು ಎಸ್ಐ ಆಗಿದ್ದ ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕದ್ರಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗುವಂತೆ ‌ಸರಕಾರ ಅದೇಶಿಸಿತ್ತು. ಕಳೆದ ವಾರವೇ ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿತ್ತಾದರೂ ಅನಾರೋಗ್ಯದ ಹಿನ್ನೆಲೆ ಅವರು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕದ್ರಿ ಪೋಲಿಸ್ ಠಾಣೆಯಲ್ಲಿ ಉತ್ತಮ ಅಧಿಕಾರಿ ಎಂದು ಹೆಸರುಗಳಿಸಿದ್ದ ಇವರು ಕೋಮು ಸೂಕ್ಷ್ಮವಾದ ಬಂಟ್ವಾಳಕ್ಕೆ ಬರಲು ಹಿಂದೇಟು ಹಾಕಿದ್ದರು ಎಂಬ ಮಾತುಗಳೂ ಕೇಳಿಬಂದಿವೆ.

Also Read  ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ

error: Content is protected !!
Scroll to Top