ಚೈತ್ರಾ ಕುಂದಾಪುರ ಪೊಲೀಸ್ ಕಸ್ಟಡಿ ಇಂದು ಅಂತ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉದ್ಯಮಿಗೆ ಕೋಟ್ಯಾಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳ ಪೊಲೀಸ್‌ ಕಸ್ಟಡಿ ಇಂದು ಅಂತ್ಯವಾಗಲಿದೆ.

ಈ ಹಿನ್ನೆಲೆ ಎಲ್ಲ ಆರೋಪಿಗಳನ್ನು ಸಿಸಿಬಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚೈತ್ರಾ ಜತೆಗೆ ಗಗನ್‌ ಕಡೂರು, ರಮೇಶ್‌, ಚೆನ್ನನಾಯ್ಕ್‌, ಧನರಾಜ್‌ ಹಾಗೂ ಶ್ರೀಕಾಂತ್‌ನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

Also Read  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ

error: Content is protected !!
Scroll to Top