ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.08. ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಗುರುವಾರದಂದು ನಡೆದಿದೆ.

ಗಾಯಾಳು ಯುವಕನನ್ನು ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಅಶ್ವಿತ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಳ್ತಂಗಡಿಯಿಂದ ಬಂಟ್ವಾಳಕ್ಕೆ ತೆರಳುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಅಶ್ವಿತ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

Also Read  ಮಂಗಳೂರು: ದರೆಗುಡ್ಡೆ ಗ್ರಾಮಸಭೆ

error: Content is protected !!
Scroll to Top