ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಕಡಬ ಹಾಗೂ ಸವಣೂರು ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ  ಸವಣೂರು  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಗೌರವ ಉಪಸ್ಥಿತಿಯನ್ನು ವಹಿಸುವರು. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಂದರಿ ಬಿ. ಭಾಗವಹಿಸುವರು.

error: Content is protected !!

Join the Group

Join WhatsApp Group