ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹೆಬ್ರಿ, ಸೆ. 25. ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಈಶ್ವರನಗರ ಎಂಬಲ್ಲಿ ನಡೆದಿದೆ.

ಮೃತರನ್ನು ವಿಷ್ಣುಮೂರ್ತಿ(48) ಎಂದು ಗುರುತಿಸಲಾಗಿದೆ. ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಇವರು, ಸ್ನಾನ ಮಾಡಲು ಮನೆಯ ಅಂಗಳದಲ್ಲಿನ ಆವರಣವಿಲ್ಲದ ಬಾವಿಯ ಬಳಿ ಹೋಗಿದ್ದರು. ಅಲ್ಲಿ ಪಂಪ್‌ ನಲ್ಲಿ ನೀರು ಬಾರದ ಹಿನ್ನೆಲೆ ಬಾವಿಯೊಳಗೆ ಇದ್ದ ಫುಟ್ ಬಾಲ್ ಎತ್ತಿ ನೋಡಲು ಹೋಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

Also Read  MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ

error: Content is protected !!
Scroll to Top