ಬೆಂಗಳೂರು ಬಂದ್ ಹಿನ್ನೆಲೆ – ವಿಮಾನ ಪ್ರಯಾಣವನ್ನು‌ ರದ್ದುಗೊಳಿಸಿದ ಏರ್ ಲೈನ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಮಾಡಿ ರೈತ ಪರ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಪರಿಣಾಮ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹೋರಾಟವನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಹಾಗೂ ಬೆಂಗಳೂರಿನಿಂದ ಬೇರೆ ಪ್ರದೇಶಕ್ಕೆ ತೆರಳುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದು ಮಾಡಿರುವ ಹಿನ್ನೆಲೆ ಕೊನೆ ಕ್ಷಣದಲ್ಲಿ ಸುಮಾರು 13 ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ ರದ್ದು ಮಾಡಿರುವುದಾಗಿ ತಿಳಿದುಬಂದಿದೆ.

Also Read  ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ

error: Content is protected !!
Scroll to Top