ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ.

ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಸಸಿಹಿತ್ಲು ಶಾಂಭವಿ ನದಿ ತೀರದಲ್ಲಿ ಅಪರಿಚಿತ ಶವ ಪತ್ತೆ

error: Content is protected !!
Scroll to Top