ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, . 05. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದ್ದು, ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈಯಲಾಗಿತ್ತು.

Also Read  ಜಾನುವಾರು ಕಳ್ಳತನ- ಇಬ್ಬರ ಬಂಧನ

error: Content is protected !!
Scroll to Top