ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. 4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಆರಂತೋಡು ಗ್ರಾಮದ ಪಂಚಾಯತ್ ಅದ್ಯಕ್ಷರಾದ ಶ್ರೀ ಕೇಶವ ಅಡ್ತಲೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಮಾಲಿನಿ ವಿನೋದ್ ಉಳುವಾರು ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಶೇಷಗಿರಿ ಯು.ಎಂ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಪುರುಷೋತ್ತಮ್, ನಿರ್ದೇಶಕರಾದ ಕೆಸಿ ನಾರಾಯಣ ಕುಯಿನ್ ತೋಡು, ಮೋಹನ ಕಿನಾಲ. ತೇಜಕುಮಾರ್ ಸಂಘದ ಸದಸ್ಯರಾದ ಕಿರಣ್ ಸಣ್ಣಮನೆ, ಕಾರ್ಯದರ್ಶಿ ಶ್ರೀಮತಿ ವಿಮಲಾ ಸೋಮಶೇಖರ್ ಹಾಗೂ ಪಶು ವೈದ್ಯರಾದ ಪಾಲಾಕ್ಷ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Also Read  ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್‌ಸಿಬಿ ತಂಡ

error: Content is protected !!
Scroll to Top