ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ರಾಜ್ಯದಲ್ಲಿ ವಿದ್ಯುತ್‌ ಕೊರತೆಯ ಹಿನ್ನೆಲೆ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದ್ದು, ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದರ ಬೆನ್ನಲ್ಲೇ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯರವರು, ಕೃಷಿ ಪಂಪ್‌ಸೆಟ್‌ಗೆ ಕನಿಷ್ಠ 5 ಗಂಟೆ ನಿರಂತರ ವಿದ್ಯುತ್‌ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಇದರ ಜೊತೆಗೆ ನವೆಂಬರ್‌ ತಿಂಗಳಿನಿಂದ ಉತ್ತರ ಪ್ರದೇಶದಿಂದ 300 ಮೆಗಾವ್ಯಾಟ್‌, ಪಂಜಾಬ್‌ ನಿಂದ 600 ಮೆಗಾವ್ಯಾಟ್‌, ಮತ್ತು KERC ಅನುಮೋದನೆಯೊಂದಿಗೆ 1,300-1,500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿರುವುದಾಗಿ ವರದಿಯೊಂದು ತಿಳಿಸಿದೆ.

Scroll to Top