ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕ ಸುರೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Scroll to Top