ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.16. ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್ (23) ಎಂದು ಗುರುತಿಸಲಾಗಿದೆ. ದೀಕ್ಷಿತ್ ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ತಕ್ಷಣವೇ ಆಂಬುಲೆನ್ಸ್ ನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

error: Content is protected !!
Scroll to Top