(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 10) ಬೆಳಿಗ್ಗೆ 8.55 ಕ್ಕೆ ವಿಮಾನದ ಮೂಲಕ ಬಜ್ಪೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ.

9.45 ಕಲ್ಲಡ್ಕ ಶ್ರೀರಾಮ ವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು 4.20 ಕ್ಕೆ ಹಿಂತಿರುಗಿ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮುಂಬೈಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.










